Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:52 - ಕನ್ನಡ ಸಮಕಾಲಿಕ ಅನುವಾದ

52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಸಾರಿಯಾ ಫುಟುನ್ ಉಗಡ್ಲ್ಯಾ, ಅನಿ ಸುಮಾರ್ ಮರಲ್ಲಿ ದೆವಾಚಿ ಲೊಕಾ ಝಿತ್ತಿ ಹೊವ್ನ್ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:52
13 ತಿಳಿವುಗಳ ಹೋಲಿಕೆ  

ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.


ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು