Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:63 - ಕನ್ನಡ ಸಮಕಾಲಿಕ ಅನುವಾದ

63 “ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 “ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 “ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಅನಿ, “ಸಾಯ್ಬಾನು, ಅಮ್ಕಾ ಯಾದ್ ಹಾಯ್ ತೊ ಝುಟೊ ಮಾನುಸ್ ಝಿತ್ತೊ ರ್‍ಹಾತಾನಾ, ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:63
18 ತಿಳಿವುಗಳ ಹೋಲಿಕೆ  

ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.


ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.


ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.


ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.


ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.


“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?


ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.


ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.


ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.


ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು