Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:11 - ಕನ್ನಡ ಸಮಕಾಲಿಕ ಅನುವಾದ

11 “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮಿ ಪಾಪ್ ಕರ್‍ತಲೆ ಸೊಡ್ಲ್ಯಾಶಿ ಮನುನ್ ಎಕ್ ವಳಕ್ ಮನುನ್ ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ ಮಾಜ್ಯಾ ಮಾನಾ ಅನಿ ಎಕ್ಲೊ ಯೆತಲೊ ಹಾಯ್ ತೊ ಮಾಜ್ಯಾನ್ಕಿ ಮೊಟೊ, ತೆಚ್ಯಾ ಪಾಯಾತ್ಲಿ ವ್ಹಾನಾ ಕಾಡುಕ್ ಸೈತ್ ಮಿಯಾ ಯೊಗ್ಯ್ ನ್ಹಯ್. ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:11
29 ತಿಳಿವುಗಳ ಹೋಲಿಕೆ  

ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.


ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.


ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.


ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು