Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:4 - ಕನ್ನಡ ಸಮಕಾಲಿಕ ಅನುವಾದ

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುವಾಂವಾಕ್ ಒಂಟೆಚ್ಯಾ ಕೆಸಾನಿ ಕರಲ್ಲೆ ಕಪ್ಡೆ ನೆಸಲ್ಲ್ಯಾನ್, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಭಾಂದಲ್ಲ್ಯಾನ್, ಟುಪ್ಪುನ್ಯಾ ಅನಿ ಡಂಗ್ಳಿತ್ಲೆ ಮ್ಹಾವ್ ಖಾವ್ನ್ ತೊ ಜಿವನ್ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:4
12 ತಿಳಿವುಗಳ ಹೋಲಿಕೆ  

ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.


ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.


ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.


“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.


ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.


ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.


ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು