Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:8 - ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊಲ್ಯಾರ್ ತುಮ್ಚೆ ಪಾಪಾಚೆ ಜಿವನ್ ಅತ್ತಾ ಬದಲ್ಲಾ ಮನುನ್ ದಾಕ್ವುನ್ ದಿತಲಿ ಕಾಮಾ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:8
16 ತಿಳಿವುಗಳ ಹೋಲಿಕೆ  

ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು