Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:10 - ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್, “ಸೈತಾನಾ ಮಾಜ್ಯಾಕ್ನಾ ಧುರ್ ಜಾ, ಪವಿತ್ರ್ ಪುಸ್ತಕ್ ಸಾಂಗ್ತಾ, ಸರ್ವೆಸ್ವರಾ ತುಜ್ಯಾ ದೆವಾಚೆ ಎಕ್ಲ್ಯಾಚೆಚ್ ಪಾಯ್ ಪಡ್, ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:10
30 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.


ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.


ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.


ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.


ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.


ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು