Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಸೈತಾನನು ಆತನನ್ನು ಬಿಟ್ಟುಬಿಟ್ಟನು. ಮತ್ತು ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಗಿರೊ ಜೆಜುಕ್ ಸೊಡುನ್ ಗೆಲೊ; ತನ್ನಾ ದೆವಾಚಿ ದುತಾ ಯೆಲಿ, ಅನಿ ತೆಚಿ ಮಜತ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:11
13 ತಿಳಿವುಗಳ ಹೋಲಿಕೆ  

ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.


ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.


ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.


“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು