Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರವಾದಿಯಾದ ಯೆಶಾಯನು ನುಡಿದಿದ್ದ ಮಾತು ಹೀಗೆ ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಶೆ ಇಸಾಯಿಯಾ ಪ್ರವಾದ್ಯಾನ್ ಸಾಂಗಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:14
15 ತಿಳಿವುಗಳ ಹೋಲಿಕೆ  

ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.


ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.


ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


“ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು