Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:16 - ಕನ್ನಡ ಸಮಕಾಲಿಕ ಅನುವಾದ

16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾನಿ ಎಕ್ ಮೊಟೊ ಉಜ್ವೊಡ್ ಬಗಟ್ಲ್ಯಾನಿ, ಮರ್‍ನಾಚ್ಯಾ ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾಂಚ್ಯಾ ವರ್‍ತಿ ಉಜ್ವೊಡ್ ಫಾಕ್ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:16
14 ತಿಳಿವುಗಳ ಹೋಲಿಕೆ  

ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”


ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.


ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.


ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು