Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:23 - ಕನ್ನಡ ಸಮಕಾಲಿಕ ಅನುವಾದ

23 ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:23
46 ತಿಳಿವುಗಳ ಹೋಲಿಕೆ  

ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?


ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.


ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,


ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.


ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.


ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.


ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.


ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:


“ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ.


“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.


ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.


ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.


ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.


ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.


ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.


“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು