Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:24 - ಕನ್ನಡ ಸಮಕಾಲಿಕ ಅನುವಾದ

24 ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:24
41 ತಿಳಿವುಗಳ ಹೋಲಿಕೆ  

“ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.


“ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.


ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.


ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.


ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.


ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.


ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.


ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.


ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.


ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,


ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.


ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು.


ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು.


ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.


ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.


ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.


ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.


ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ.


ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.


ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.


ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?


ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.


ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.


ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.


ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು