Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:4 - ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಜೆಜುನ್, “ಪವಿತ್ರ್ ಪುಸ್ತಕ್ ಸಾಂಗ್ತಾ, ಮಾನುಸ್ ಖಾಲಿ ಭಾಕ್ರಿ ವೈನಾ ಎವ್ಡೆಚ್ ಜಿವನ್ ಕರಿನಾ, ಖರೆ ದೆವಾನ್ ಬೊಲಲ್ಲ್ಯಾ ಹರಿಎಕ್ ಗೊಸ್ಟಿಯಾಂಚ್ಯಾ ವೈನಾ ತೊ ಜಿವನ್ ಕರ್‍ತಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:4
26 ತಿಳಿವುಗಳ ಹೋಲಿಕೆ  

ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.


ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ.


ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.


ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು