Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಜೆಜುನ್, “ಖರೆ ಪವಿತ್ರ್ ಪುಸ್ತಕ್, ಸರ್ವೆಸ್ವರಾಚಿ ತುಜ್ಯಾ ದೆವಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:7
21 ತಿಳಿವುಗಳ ಹೋಲಿಕೆ  

ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.


ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.


ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.


ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು.


“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.


ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.


ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು