Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:9 - ಕನ್ನಡ ಸಮಕಾಲಿಕ ಅನುವಾದ

9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:9
31 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.


ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.


ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ?


ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು