Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:28 - ಕನ್ನಡ ಸಮಕಾಲಿಕ ಅನುವಾದ

28 “ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಅನಿ ಕಪ್ಡ್ಯಾಂಚ್ಯಾ ವಿಶಯಾತ್ ತುಮಿ ಕಶ್ಯಾಕ್ ಯವಜ್ತ್ಯಾಶಿ? ಬಗಾ ತಿ ಶೆತಾತ್ಲಿ ಫುಲ್ಲಾ ತಿ ಕಸೆ ಉಗಾವ್ತ್ಯಾತ್; ತಿ ಕಾಮ್ ಕರಿನ್ಯಾತ್, ನಾ ಅಪ್ನಾಸಾಟ್ನಿ ಕಪ್ಡೆ ತಯಾರ್ ಕರಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:28
13 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.


ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.


ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು