Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:15 - ಕನ್ನಡ ಸಮಕಾಲಿಕ ಅನುವಾದ

15 ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಸು ಆಕೆಯ ಕೈಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮುಟ್ಟಿದಾಗಲೇ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ತಿಚೊ ಹಾತ್ ಧರುನ್ ತಿಕಾ ಉಟ್ವುಲ್ಯಾನ್. ತನ್ನಾಚ್ ತಿಚೊ ತಾಪ್ ತಿಕಾ ಸೊಡುನ್ ಗೆಲೊ. ತಿ ಉಟ್ಲಿ ಅನಿ ಜೆಜುಚಿ ಚಾಕ್ರಿ ಕರುಕ್ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:15
15 ತಿಳಿವುಗಳ ಹೋಲಿಕೆ  

ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.


ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.


ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.


ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.


ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.


ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,


ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.


ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.


ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.


ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.


ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು