Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:16 - ಕನ್ನಡ ಸಮಕಾಲಿಕ ಅನುವಾದ

16 ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಾಂಜ್ ಹೊಲ್ಲ್ಯಾ ತನ್ನಾ ಲೊಕಾನಿ ಗಿರೆಲಾಗಲ್ಲ್ಯಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ಜೆಜುನ್ ಅಪ್ನಾಚ್ಯಾ ಗೊಸ್ಟಿಯಾನಿ ತೆಂಚೆ ಸಗ್ಳ್ಯಾಂಚೆ ಗಿರೆ ಭಾಯ್ರ್ ಕಾಡ್ಲ್ಯಾನ್, ಅನಿ ಸಿಕ್ ಹೊತ್ತ್ಯಾಕ್ನಿ ಆರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:16
17 ತಿಳಿವುಗಳ ಹೋಲಿಕೆ  

ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.


ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.


ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.


ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.


ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.


ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು.


ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.


ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು