Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:26 - ಕನ್ನಡ ಸಮಕಾಲಿಕ ಅನುವಾದ

26 ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ ತೆಂಕಾ, “ತುಮಿ ಎವ್ಡೆ ಲೈ ಕಶ್ಯಾಕ್ ಭಿಂವ್ಲ್ಯಾಶಿ? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!” ಮಟ್ಲ್ಯಾನ್. ತನ್ನಾ ತೊ ಉಟುನ್ ಇಬೆ ರ್‍ಹಾಲೊ ಅನಿ ವಾರ್ಯಾಕ್ ಅನಿ ಲ್ಹಾಟಾಕ್ನಿ ಗಪ್ ರ್‍ಹಾವಾ ಮನುನ್ ಸಾಂಗ್ಲ್ಯಾನ್, ತನ್ನಾ ಸಗ್ಳೆ ಎಗ್ದಮ್ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:26
24 ತಿಳಿವುಗಳ ಹೋಲಿಕೆ  

ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.


ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?


ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?


ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು,


ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?


ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು