Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ಅಪ್ನಾಚೊ ಹಾತ್ ಲಾಂಬ್ ಕರುನ್ ತೆಕಾ ಲಾವ್ಲ್ಯಾನ್, ಅನಿ, “ಮಾಕಾ ಮನ್ ಹಾಯ್, ತಿಯಾ ಪವಿತ್ರ್ ಹೊ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತೆಚೊ ರೊಗ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:3
19 ತಿಳಿವುಗಳ ಹೋಲಿಕೆ  

ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.


ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.


ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.


ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.


ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.


ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.


ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.


ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.


ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.


ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.


ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು