Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:22 - ಕನ್ನಡ ಸಮಕಾಲಿಕ ಅನುವಾದ

22 ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುನ್ ಫಾಟಿ ಪರ್ತುನ್ ತಿಕಾ ಬಗಟ್ಲ್ಯಾನ್ ಅನಿ, “ಮಾಜ್ಯಾ ಲೆಕಿ, ಧೈರೊ ಘೆ! ತುಜ್ಯಾ ವಿಶ್ವಾಸಾನ್ ತಿಯಾ ಬರಿ ಹೊಲೆ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚೊ ರೊಗ್ ಅರಾಮ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:22
15 ತಿಳಿವುಗಳ ಹೋಲಿಕೆ  

ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.


ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.


ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.


ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.


ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.


ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,


ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.


ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು