Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:28 - ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಥೈ ಘರಾತ್ ಪಾವಲ್ಲ್ಯಾ ತನ್ನಾ ದೊಗೆಬಿ ಕುಡ್ಡೆ ಜೆಜುಕ್ಡೆ ಯೆಲೆ. ಜೆಜುನ್ ತೆಂಕಾ, “ಮಿಯಾ ತುಮ್ಕಾ ದಿಸ್ಟ್ ದಿವ್ಕ್ ಹೊತಾ ಮನುನ್ ತುಮ್ಕಾ ವಿಶ್ವಾಸ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಹೊಯ್ ಧನಿಯಾ,” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:28
14 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,


ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.


ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.


ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.


ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.


ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,


ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು