Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:36 - ಕನ್ನಡ ಸಮಕಾಲಿಕ ಅನುವಾದ

36 ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದರೆ ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ತೊಳಲಿ ಬಳಲಿ ಹೋಗಿದ್ದಾರಲ್ಲ ಎಂದು ಅವರ ಮೇಲೆ ಕನಿಕರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಲೊಕಾಂಚ್ಯಾ ತಾಂಡ್ಯಾಕ್ನಿ ಬಗುನ್, ಜೆಜುಕ್ ತೆಂಚೊ ಪಾಪ್ ದಿಸ್ಲೊ. ಕಶ್ಯಾಕ್ ಮಟ್ಲ್ಯಾರ್, ತಿ ಲೊಕಾ ಬೆಜಾರಾನ್ ಅನಿ ಕಾಯ್ಬಿ ಅದಾರ್ ‍ನಸ್ತಾನಾ ರಾಕ್ವಾಲಿನಸಲ್ಲ್ಯಾ ಬಕ್ರ್ಯಾಂಚ್ಯಾ ಸರ್ಕೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:36
18 ತಿಳಿವುಗಳ ಹೋಲಿಕೆ  

ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.


ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.


ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.


“ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು