Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:4 - ಕನ್ನಡ ಸಮಕಾಲಿಕ ಅನುವಾದ

4 ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಸು ಅವರ ಆಲೋಚನೆಯನ್ನು ತಿಳಿದು - ನೀವು ಯಾಕೆ ನಿಮ್ಮ ಮನಸ್ಸಿನಲ್ಲಿ ಕೆಟ್ಟ ಆಲೋಚನೆಯನ್ನು ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುನ್ ತೆನಿ ಕಾಯ್ ಯವ್ಜುಕ್ ಲಾಗ್ಲ್ಯಾತ್ ಮನುನ್ ಕಳ್ವುನ್ ಘೆಟ್ಲ್ಯಾನ್, ಅನಿ ತೆನಿ ತೆಂಕಾ, “ತುಮಿ ತುಮ್ಚ್ಯಾ ಮನಾತ್ನಿ ಅಶೆ ಚುಕ್ ಕಶ್ಯಾಕ್ ಯೌಜುಲ್ಯಾಸಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:4
24 ತಿಳಿವುಗಳ ಹೋಲಿಕೆ  

ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.


ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.


ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?


ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.


ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?


ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು