Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:10 - ಕನ್ನಡ ಸಮಕಾಲಿಕ ಅನುವಾದ

10 “ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:10
21 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.


ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು