Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:13
28 ತಿಳಿವುಗಳ ಹೋಲಿಕೆ  

ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.


“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.


ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.


ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು