Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:4 - ಕನ್ನಡ ಸಮಕಾಲಿಕ ಅನುವಾದ

4 ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:4
37 ತಿಳಿವುಗಳ ಹೋಲಿಕೆ  

ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”


ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.


ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.


ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”


ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.


ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.


ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು