Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:7
14 ತಿಳಿವುಗಳ ಹೋಲಿಕೆ  

“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.


ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು