Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:12 - ಕನ್ನಡ ಸಮಕಾಲಿಕ ಅನುವಾದ

12 ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:12
28 ತಿಳಿವುಗಳ ಹೋಲಿಕೆ  

ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


“ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.


ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.


“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು