Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:13 - ಕನ್ನಡ ಸಮಕಾಲಿಕ ಅನುವಾದ

13 ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:13
15 ತಿಳಿವುಗಳ ಹೋಲಿಕೆ  

ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.


“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.


ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು