Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:10 - ಕನ್ನಡ ಸಮಕಾಲಿಕ ಅನುವಾದ

10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:10
35 ತಿಳಿವುಗಳ ಹೋಲಿಕೆ  

ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.


ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.


ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.


ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.


ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.


ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.


ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು