Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:11 - ಕನ್ನಡ ಸಮಕಾಲಿಕ ಅನುವಾದ

11 “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:11
15 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.


ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”


ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು