Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:3 - ಕನ್ನಡ ಸಮಕಾಲಿಕ ಅನುವಾದ

3 ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:3
48 ತಿಳಿವುಗಳ ಹೋಲಿಕೆ  

ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.


ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.


ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು