Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:5 - ಕನ್ನಡ ಸಮಕಾಲಿಕ ಅನುವಾದ

5 “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:5
63 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.


ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?


ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.


ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ,


ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.


ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.


ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.


ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು