Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:1 - ಕನ್ನಡ ಸಮಕಾಲಿಕ ಅನುವಾದ

1 “ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:1
37 ತಿಳಿವುಗಳ ಹೋಲಿಕೆ  

ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.


ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ; ಆದ್ದರಿಂದ ನಾನು ನಿಮ್ಮ ಶಾಸನಗಳನ್ನು ಪ್ರೀತಿಸುತ್ತೇನೆ.


“ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ”


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


“ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು