Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:5 - ಕನ್ನಡ ಸಮಕಾಲಿಕ ಅನುವಾದ

5 “ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:5
16 ತಿಳಿವುಗಳ ಹೋಲಿಕೆ  

ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು