Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:6
28 ತಿಳಿವುಗಳ ಹೋಲಿಕೆ  

ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.


ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.


ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು