Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:41 - ಕನ್ನಡ ಸಮಕಾಲಿಕ ಅನುವಾದ

41 ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನನಗೆ ಮನಸ್ಸುಂಟು; ಶುದ್ಧವಾಗು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜುಕ್ ತೆಚೊ ಪಾಪ್‍ ದಿಸ್ಲೊ, ಜೆಜುನ್ ತೆಕಾ ಅಪ್ನಾಚ್ಯಾ ಹಾತಾನಿ ಅಪ್ಡುನ್ “ಮಾಕಾ ಮನ್ ಹಾಯ್. ತಿಯಾ ಪವಿತ್ರ್ ಹೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:41
12 ತಿಳಿವುಗಳ ಹೋಲಿಕೆ  

ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.


ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.


ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.


ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು