Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಜೆಜು ತೆಂಚೆಕ್ಡೆ ಕಾನಿಯಾಂಚ್ಯಾ ವೈನಾ ಬೊಲುಕ್ಲಾಗ್ಲೊ. ಎಕ್ ಮಾನ್ಸಾನ್ ದ್ರಾಕ್ಷಿಚೊ ಮ್ಹಳೊ ಕರುನ್, ಭೊತ್ಯಾನಿ ಕುಪ್ ಘಾಟ್ಲ್ಯಾನ್, ದ್ರಾಕ್ಷಿಚೊ ರೊಸ್ ಕಾಡುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್, ಅನಿ ಶೆತ್ ರಾಕುಕ್ ಮನುನ್ ಶೆತಾತ್ ಎಕ್ ಬರೊ ಮಾಳೊ ಭಾಂದ್ಲ್ಯಾನ್, ಮಾನಾ ತೆ ಶೆತ್ ರೈತಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:1
38 ತಿಳಿವುಗಳ ಹೋಲಿಕೆ  

ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:


“ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.


ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.


ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.


“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?


ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು