Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:13 - ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುಕ್ ತೆಚ್ಯಾಚ್ ಗೊಸ್ಟಿಯಾತ್ನಿ ಗೊಂದ್ಳುನ್ ಘಾಲುವಾ ಮನ್ತಲ್ಯಾ ಉದ್ದೆಶಾನ್ ಥೊಡಿ ಫಾರಿಜೆವಾ ಅನಿ ಥೊಡಿ ಹೆರೊದಾಚ್ಯಾ ಪಕ್ಷಾಚಿ ಲೊಕಾ ಜೆಜುಕ್ಡೆ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:13
12 ತಿಳಿವುಗಳ ಹೋಲಿಕೆ  

ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.


ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.


ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು