Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:15 - ಕನ್ನಡ ಸಮಕಾಲಿಕ ಅನುವಾದ

15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತೆಂಚೊ ಘಾತ್ ಕಳ್ವುನ್ ಘೆಟ್ಲ್ಯಾನ್ ಅನಿ “ತುಮಿ ಮಾಕಾಚ್ ಗೊಂದ್ಳುನ್ ಘಾಲುವಾ ಮನುನ್ ಕಶ್ಯಾಕ್ ಯವ್ಜುಕ್ ಲಾಗ್ಲ್ಯಾಸಿ? ಎಕ್ ಚಾಂದಿಚಿ ಪೈಸ್ಯಾಚಿ ಗಾಲಿ ಮಾಜ್ಯಾಕ್ಡೆ ದಿವಾ ಬಗುವಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:15
14 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಆದರೆ ಯೇಸು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ,


ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.


ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.


ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?


ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.


ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು