ಮಾರ್ಕ 12:2 - ಕನ್ನಡ ಸಮಕಾಲಿಕ ಅನುವಾದ2 ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫಲಕಾಲ ಬಂದಾಗ ದ್ರಾಕ್ಷೆಯ ತೋಟದ ಹಣ್ಣಿನ ಪಾಲನ್ನು ಆ ಒಕ್ಕಲಿಗರಿಂದ ತೆಗೆದುಕೊಂಡು ಬರುವದಕ್ಕಾಗಿ ಒಬ್ಬ ಆಳನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದರಾಕ್ಷಿ ಗೊಳಾ ಕರ್ತಲಿ ಸುಗ್ಗಿಚಿ ದಿಸಾ ಯೆಲ್ಲ್ಯಾ ತನ್ನಾ; ಅಪ್ನಾಚೊ ವಾಟೊ ಮಾಗುನ್ ಹಾನುಕ್ ಮನುನ್ ತ್ಯಾ ಮಳ್ಯಾಚ್ಯಾ ಸಾವ್ಕಾರಾನ್ ಅಪ್ನಾಚ್ಯಾ ಎಕ್ ಸೆವಕಾಕ್ ಧಾಡುನ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.