Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:12 - ಕನ್ನಡ ಸಮಕಾಲಿಕ ಅನುವಾದ

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ಅಪ್ನಾಚ್ಯಾ ಸಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲೆ ಇಸ್ಟ್ ಘಾಲಿನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಪಾಸ್ಕಾಚ್ಯಾ ಸನಾಚ್ಯಾ ಜೆವ್ನಾಚೆ ಬಕ್ರೆ ಬಲಿ ದಿತಲ್ಯಾ ದಿಸಿ, ಶಿಸಾನಿ ಜೆಜುಕ್ಡೆ ಯೆವ್ನ್ “ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಅಮಿ ಖೈ ಜಾವ್ನ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:12
16 ತಿಳಿವುಗಳ ಹೋಲಿಕೆ  

ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.


ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು