Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:15 - ಕನ್ನಡ ಸಮಕಾಲಿಕ ಅನುವಾದ

15 ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಮೇಲುಪ್ಪರಿಗೆಯಲ್ಲಿ ಸಿದ್ಧವಾಗಿರುವ ಹಾಗೂ ಸುಸಜ್ಜಿತವಾದ ದೊಡ್ಡ ಕೊಠಡಿಯನ್ನು ತೋರಿಸುವನು. ಅಲ್ಲಿ ನಮಗೆ ಊಟ ಸಿದ್ಧಮಾಡಿರಿ,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ತಕ್ಕ ಸಾಮಾನೆಲ್ಲಾ ಸಿದ್ಧವಾಗಿ ಇಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತೊ ವಡಿಲ್ ತುಮ್ಕಾ ಮ್ಹಾಳ್ಗಿ ವರ್‍ತಿ ಹೊತ್ತಿ ಮೊಟಿ ಖೊಲಿ ದಾಕ್ವುತಾ, “ಥೈ ಅಮ್ಕಾ ಸಗ್ಳೆ ಬರೆ ಕರುನ್ ತಯಾರ್ ಕರುನ್ ಥವಲ್ಲೆ ರ್‍ಹಾತಾ. ಥೈ ಜೆವ್ನಾಚಿ ತಯಾರಿ ಕರಾ” ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:15
12 ತಿಳಿವುಗಳ ಹೋಲಿಕೆ  

ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.


ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.


ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು