Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:20 - ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನು ಅವರಿಗೆ - ಅವನು ನನ್ನ ಹನ್ನೆರಡು ಮಂದಿಯಲ್ಲಿ ಒಬ್ಬನು, ನನ್ನ ಸಂಗಡ ಬಟ್ಟಲಲ್ಲಿ ಕೈ ಅದ್ದುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಜೆಜುನ್ ತೆಂಕಾ “ತುಮ್ಚ್ಯಾ ಬಾರಾ ಜಾನಾನಿತ್ಲೊ ಎಕ್ಲೊ, ತೊ ಮಾಜ್ಯಾ ವಾಂಗ್ಡಾಚ್ ಆಯ್ದಾನಾತ್ ಅಪ್ನಾಚೊ ಭಾಕ್ರಿಚೊ ತುಕ್ಡೊ ಬುಡ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:20
9 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.


ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು.


ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು