Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:35 - ಕನ್ನಡ ಸಮಕಾಲಿಕ ಅನುವಾದ

35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೆಲದ ಮೇಲೆ ಅಡ್ಡಬಿದ್ದು ಸಾಧ್ಯವಾದರೆ ಆ ಗಳಿಗೆ ತನ್ನನ್ನು ಬಿಟ್ಟುಹೋಗುವಂತೆ ದೇವರನ್ನು ಪ್ರಾರ್ಥಿಸಿ-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಅವರಿಂದ ಸ್ವಲ್ಪದೂರ ನಡೆದುಹೋಗಿ ನೆಲದ ಮೇಲೆ ಬೋರಲಬಿದ್ದು, ಪ್ರಾರ್ಥಿಸುತ್ತಾ “ಸಾಧ್ಯವಾದರೆ, ಈ ಸಂಕಟದ ಗಳಿಗೆ ನನಗೆ ಬಾರದಿರಲಿ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅನಿ ಜೆಜು ಉಲ್ಲೆ ಫಿಡೆ ಗೆಲೊ ಅನಿ ಜಿಮ್ನಿರ್ ಡಬ್ ಪಡುನ್ “ಸಾದ್ಯ್ ರ್‍ಹಾಲ್ಯಾರ್ ಹ್ಯೊ ಸಂಕಟಾಚೊ ಎಳ್ ಮಾಜೆಕ್ನಾ ದುರ್ ಕರ್” ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:35
14 ತಿಳಿವುಗಳ ಹೋಲಿಕೆ  

ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”


ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು