Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:37 - ಕನ್ನಡ ಸಮಕಾಲಿಕ ಅನುವಾದ

37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಾನಾ ಜೆಜು ಅಪ್ನಾಚ್ಯಾ ತಿನ್ ಶಿಸಾಂಚ್ಯಾಕ್ಡೆ ಯೆಲೊ ಅನಿ ತೆನಿ ತಿಗೆ ಜಾನಾಬಿ ನಿಜಲ್ಲೆ ಬಗುನ್ ತೆನಿ ಪೆದ್ರುಕ್ “ಸಿಮಾವ್, ತಿಯಾ ನಿದ್ಲೆ ಕಾಯ್? ಎಕ್ ತಾಸ್ಬರ್ ಸೈತ್ ಮಾಜ್ಯಾ ವಾಂಗ್ಡಾ ತುಕಾ ಜಾಗೆ ರಾವ್ಕ್ ಹೊಯ್ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:37
13 ತಿಳಿವುಗಳ ಹೋಲಿಕೆ  

ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.


ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು.


“ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?


ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು