Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:19 - ಕನ್ನಡ ಸಮಕಾಲಿಕ ಅನುವಾದ

19 ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಚ್ಯಾ ಟಕ್ಲ್ಯಾ ವರ್‍ತಿ ಭೆತ್ತಾಚ್ಯಾ ಖಾಟಿನಿ ಮಾರುನ್, ತೊಂಡಾ ವರ್‍ತಿ ಥುಕುನ್, ಇದ್ರಾಕ್ ಡೊಗ್ಲಾ ಟೆಕುನ್ ತೆಚಿ ತುಜ್ಯಾ ಕರ್ಲ್ಯಾ ಸಾರ್ಕೆ ನಾಟಕ್ ಕರುನ್ ತೆಕಾ ಎಡ್ಸಡುನ್ ದಾಕ್ವುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:19
32 ತಿಳಿವುಗಳ ಹೋಲಿಕೆ  

ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?


ಸೈನಿಕರು ಸಹ ಯೇಸುವಿನ ಬಳಿಗೆ ಬಂದು ಅವರನ್ನು ಹಾಸ್ಯಮಾಡಿ ಯೇಸುವಿಗೆ ಹುಳಿರಸವನ್ನು ಕೊಟ್ಟು,


ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.


ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.


ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.


ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?


ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.


ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,


ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?


ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.


ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.


ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು.


ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.


ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.


ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು