Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:14 - ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆಕ್ರಿಕ್ ಅಕ್ರಾ ಜಾನಾ ಶಿಸಾ ಜೆವ್ತಾನಾ ಜೆಜು ತೆಂಕಾ ದಿಸ್ಲೊ, ಅನಿ ತೆಂಕಾ ಜೊರ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾತ್ಲ್ಯಾನಿ ತೆಕಾ ಝಿತ್ತೊ ಹೊತ್ತೊ ಬಗಟಲ್ಲ್ಯಾನಿ, ಜಾಲ್ಯಾರ್‍ಬಿ ತೆಂಚಿ ಕಾಳ್ಜಾ ವಿಶ್ವಾಸ್ ಕರಿನಸ್ತಾನಾ ರಾವ್ಕ್ ಸರ್ಕಿ ಘಟ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:14
24 ತಿಳಿವುಗಳ ಹೋಲಿಕೆ  

ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.


ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.


ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.


ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:


ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು