Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:18 - ಕನ್ನಡ ಸಮಕಾಲಿಕ ಅನುವಾದ

18 ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಸಾಂಪ್ ಹಾತಿತ್ ಧರುನ್ ಘೆಟ್ಲ್ಯಾರ್ಬಿ ಕಸ್ಲೆ ವಿಸ್ ಫಿಲ್ಯಾರ್ಬಿ ತೆಂಕಾ ಕಾಯ್-ಕಾಯ್ ಹೊಯ್ನಾ, ತೆನಿ ಸಿಕ್ ಹೊತ್ತ್ಯಾಂಚ್ಯಾ ಆಂಗಾಕ್ ಅಪಡ್ಲ್ಯಾರ್ ತೆನಿ ಗುನ್ ಹೊತ್ಯಾತ್”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:18
21 ತಿಳಿವುಗಳ ಹೋಲಿಕೆ  

ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.


ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?


“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು