Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:1 - ಕನ್ನಡ ಸಮಕಾಲಿಕ ಅನುವಾದ

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಲವು ದಿನಗಳಾದ ಮೇಲೆ ಆತನು ಕಪೆರ್ನೌವಿುಗೆ ತಿರಿಗಿ ಬಂದನು. ಮನೆಯಲ್ಲಿದ್ದಾನೆಂಬ ವರ್ತಮಾನವು ಹಬ್ಬಿದಾಗ ಬಹುಜನರು ಕೂಡಿ ಬಂದಿದ್ದರಿಂದ ಬಾಗಿಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಉಲ್ಲಿ ದಿಸಾ ಹೊಲ್ಲ್ಯಾಮಾನಾ, ಜೆಜು ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಯೆಲೊ. ತೊ ಥೈ, ಎಕ್ ಘರಾತ್ ಹಾಯ್ ಮನ್ತಲಿ ಖಬರ್, ಲೊಕಾಕ್ನಿ ಗಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:1
13 ತಿಳಿವುಗಳ ಹೋಲಿಕೆ  

ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.


ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.


ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.


ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.


ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.


ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.


ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.


ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು